Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • Entertainment
    • English
      • English
    The Prime Voice
    Home»Crime»₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ
    Crime

    ₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ

    The Prime VoiceBy The Prime VoiceJune 5, 2026Updated:June 6, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಜೂನ್ 5:  ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕೆ ₹5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ.

    ದೂರುದಾರ ಬೆಳತೂರು ಪರಮೇಶ್ ರಿಂದ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಆರೋಪಿಗಳೊಂದಿಗೆ ಮಾತುಕತೆ ನಡೆದಿದ್ದು, ಮೊದಲ ಕಂತುವಾಗಿ ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ರೆಡ್‌ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆಯಲಾಗಿದೆ.

    ಪ್ರಕರಣ ಸಂಬಂಧ ದಾಖಲೆಗಳು ಮತ್ತು ಇತರೆ ಸಾಕ್ಷ್ಯಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

    ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತ, ಸಾರ್ವಜನಿಕರು ಲಂಚ ಬೇಡಿಕೆ ಕುರಿತು ದೂರು ನೀಡುವಂತೆ ಮನವಿ ಮಾಡಿದೆ.

    Post Views: 745
    2 lakh caught red handed 5 lakh bribe demand BBMP officials arrested Belathur Paramesh complaint broker Mansoor GBA bribe case Karnataka corruption Lokayukta trap Bengaluru Nagabhushana Sahakarnagar Praveen Kodigehalli Prevention of Corruption Act
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Leave A Reply Cancel Reply

    Recent Posts

    • ಭಾರತದ ಕೀರ್ತಿ ಹೆಚ್ಚಿಸಿದ ಪ್ರಜ್ಞಾನಂದ; ನಾರ್ವೆ ಚೆಸ್‌ನಲ್ಲಿ ಐತಿಹಾಸಿಕ ಗೆಲುವು
    • ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ಬೆಂಬಲಿಗರೊಂದಿಗೆ ಅಭಿಜೀತ್ ದಿಪ್ಕೆ ಭಾಗಿ
    • ₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ
    • “ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲಾರೆ”: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ; ಶಾಸಕನಾಗಿ ಮುಂದುವರಿಕೆ
    • ಮತದಾರರ ಹಕ್ಕು ರಕ್ಷಣೆಗೆ ಸಿಎಂ ಡಿಕೆಶಿ ಒತ್ತು; SIR ಸಹಾಯಕ್ಕಾಗಿ ಹೆಲ್ಪ್‌ ಡೆಸ್ಕ್‌ ಸ್ಥಾಪನೆಗೆ ಆದೇಶ

    Recent Comments

    No comments to show.

    Archives

    • June 2026
    • April 2026
    • March 2026
    • August 2025

    Categories

    • Crime
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.