ಜೂನ್ 5: ಸಾರ್ವಜನಿಕರ ಕೆಲಸ ಮಾಡಿಕೊಡುವುದಕ್ಕೆ ₹5 ಲಕ್ಷ ಲಂಚ ಬೇಡಿಕೆ ಇಟ್ಟಿದ್ದ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಯಲ್ಲಿ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಅವರನ್ನು ವಶಕ್ಕೆ ಪಡೆದಿದ್ದಾರೆ.
ದೂರುದಾರ ಬೆಳತೂರು ಪರಮೇಶ್ ರಿಂದ ₹5 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದ GBA-AEE ನಾಗಭೂಷಣ (ಸಹಕಾರನಗರ), AE ಪ್ರವೀಣ್ (ಕೊಡಿಗೆಹಳ್ಳಿ) ಹಾಗೂ ಬ್ರೋಕರ್ ಮನ್ಸೂರ್ ಆರೋಪಿಗಳೊಂದಿಗೆ ಮಾತುಕತೆ ನಡೆದಿದ್ದು, ಮೊದಲ ಕಂತುವಾಗಿ ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಕಾರ್ಯಾಚರಣೆಯಲ್ಲಿ ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆಯಲಾಗಿದೆ.
ಪ್ರಕರಣ ಸಂಬಂಧ ದಾಖಲೆಗಳು ಮತ್ತು ಇತರೆ ಸಾಕ್ಷ್ಯಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದು, ಆರೋಪಿಗಳ ವಿರುದ್ಧ ಭ್ರಷ್ಟಾಚಾರ ನಿಗ್ರಹ ಕಾಯ್ದೆಯಡಿ ಪ್ರಕರಣ ದಾಖಲಿಸುವ ಪ್ರಕ್ರಿಯೆ ಮುಂದುವರಿದಿದೆ. ಈ ಕುರಿತು ಲೋಕಾಯುಕ್ತ ಅಧಿಕಾರಿಗಳು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.
ಭ್ರಷ್ಟಾಚಾರದ ವಿರುದ್ಧ ರಾಜ್ಯದಲ್ಲಿ ನಿರಂತರ ಕಾರ್ಯಾಚರಣೆ ನಡೆಸುತ್ತಿರುವ ಲೋಕಾಯುಕ್ತ, ಸಾರ್ವಜನಿಕರು ಲಂಚ ಬೇಡಿಕೆ ಕುರಿತು ದೂರು ನೀಡುವಂತೆ ಮನವಿ ಮಾಡಿದೆ.
