Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • Entertainment
    • English
      • English
    The Prime Voice
    Home»Politics»“ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲಾರೆ”: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ; ಶಾಸಕನಾಗಿ ಮುಂದುವರಿಕೆ
    Politics

    “ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲಾರೆ”: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ; ಶಾಸಕನಾಗಿ ಮುಂದುವರಿಕೆ

    The Prime VoiceBy The Prime VoiceJune 5, 2026Updated:June 5, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email
    ಬೆಂಗಳೂರು ಜೂನ್ 5: ಕಾಂಗ್ರೆಸ್‌ನ ಹಿರಿಯ ನಾಯಕ ಹಾಗೂ ಸಚಿವ ರಾಮಲಿಂಗಾ ರೆಡ್ಡಿ ಅವರು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಘೋಷಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿಗೆ ರವಾನಿಸಿದ್ದಾರೆ ಎಂದು ತಿಳಿದುಬಂದಿದೆ.
    ಬೆಂಗಳೂರು ನಗರಾಭಿವೃದ್ಧಿ ಇಲಾಖೆಯನ್ನು ನೀಡುವುದಾಗಿ ಎರಡು ಬಾರಿ ಭರವಸೆ ನೀಡಿದ್ದರೂ ಅದನ್ನು ಕಾರ್ಯರೂಪಕ್ಕೆ ತರದಿರುವುದು ತಮ್ಮ ನಿರಾಸೆ ಮತ್ತು ಬೇಸರಕ್ಕೆ ಕಾರಣವಾಗಿದೆ ಎಂದು ಅವರು ಹೇಳಿದ್ದಾರೆ. ತಮ್ಮ ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆದುಕೊಳ್ಳಲು ಸಾಧ್ಯವಿಲ್ಲದ ಕಾರಣ ಈ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.
    ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸಚಿವ ಸಂಪುಟದಲ್ಲಿ ತಮಗೆ ಜಲಸಂಪನ್ಮೂಲ ಖಾತೆ ಹಂಚಿಕೆ ಮಾಡಿರುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಬೆಂಗಳೂರಿನಿಂದ ಎಂಟು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ತಾವು, ನಗರಾಭಿವೃದ್ಧಿ ಇಲಾಖೆಯ ಜವಾಬ್ದಾರಿಯನ್ನು ನಿರೀಕ್ಷಿಸಿದ್ದಾಗಿ ತಿಳಿಸಿ, ಅದನ್ನು ನೀಡದ ಹಿನ್ನೆಲೆಯಲ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದಾಗಿ ಹೇಳಿದ್ದಾರೆ.
    Post Views: 513
    Bengaluru News Bengaluru Politics Breaking Karnataka Congress Congress Leadership DK Shivakumar Governance Karnataka Cabinet Karnataka Congress Karnataka Government Karnataka MLA Karnataka Politics Latest Politics Minister Resignation Political Drama Political News Political Update Public Interest Ramalinga Reddy Ramalinga Reddy Resignation State Politics The Prime Voice
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    ಮತದಾರರ ಹಕ್ಕು ರಕ್ಷಣೆಗೆ ಸಿಎಂ ಡಿಕೆಶಿ ಒತ್ತು; SIR ಸಹಾಯಕ್ಕಾಗಿ ಹೆಲ್ಪ್‌ ಡೆಸ್ಕ್‌ ಸ್ಥಾಪನೆಗೆ ಆದೇಶ

    June 4, 2026

    ರಾಜ್ಯದ ಜನತೆಗೆ ಮತ್ತೊಂದು ಗುಡ್‌ನ್ಯೂಸ್‌: ಸಾರ್ವಜನಿಕರ ಸಮಸ್ಯೆಗಳ ಆಲಿಕೆಗೆ ಹೊಸ ಸಚಿವಾಲಯ ಘೋಷಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

    June 4, 2026
    Leave A Reply Cancel Reply

    Recent Posts

    • ಭಾರತದ ಕೀರ್ತಿ ಹೆಚ್ಚಿಸಿದ ಪ್ರಜ್ಞಾನಂದ; ನಾರ್ವೆ ಚೆಸ್‌ನಲ್ಲಿ ಐತಿಹಾಸಿಕ ಗೆಲುವು
    • ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆ; ಬೆಂಬಲಿಗರೊಂದಿಗೆ ಅಭಿಜೀತ್ ದಿಪ್ಕೆ ಭಾಗಿ
    • ₹5 ಲಕ್ಷ ಲಂಚ ಬೇಡಿಕೆ: ₹2 ಲಕ್ಷ ಸ್ವೀಕರಿಸುತ್ತಿದ್ದ ವೇಳೆ ಇಬ್ಬರು ಅಧಿಕಾರಿಗಳು ಹಾಗೂ ಬ್ರೋಕರ್ ಲೋಕಾಯುಕ್ತ ಬಲೆಗೆ
    • “ಆತ್ಮಸಾಕ್ಷಿಗೆ ವಿರುದ್ಧವಾಗಿ ನಡೆಯಲಾರೆ”: ಸಚಿವ ಸ್ಥಾನಕ್ಕೆ ರಾಮಲಿಂಗಾ ರೆಡ್ಡಿ ರಾಜೀನಾಮೆ; ಶಾಸಕನಾಗಿ ಮುಂದುವರಿಕೆ
    • ಮತದಾರರ ಹಕ್ಕು ರಕ್ಷಣೆಗೆ ಸಿಎಂ ಡಿಕೆಶಿ ಒತ್ತು; SIR ಸಹಾಯಕ್ಕಾಗಿ ಹೆಲ್ಪ್‌ ಡೆಸ್ಕ್‌ ಸ್ಥಾಪನೆಗೆ ಆದೇಶ

    Recent Comments

    No comments to show.

    Archives

    • June 2026
    • April 2026
    • March 2026
    • August 2025

    Categories

    • Crime
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.