Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Entertainment»ತಮಿಳುನಾಡಿನ ಸೊಸೆಯಾಗಲಿರುವ ಶರ್ಮಿಳಾ ಮಾಂಡ್ರೆ! ಜೂನ್ 25ರಂದು ನಿಶ್ಚಿತಾರ್ಥ, ವರನ ಬಗ್ಗೆ ತಿಳಿದರೆ ಅಚ್ಚರಿ ಪಡ್ತೀರಾ!
    Entertainment

    ತಮಿಳುನಾಡಿನ ಸೊಸೆಯಾಗಲಿರುವ ಶರ್ಮಿಳಾ ಮಾಂಡ್ರೆ! ಜೂನ್ 25ರಂದು ನಿಶ್ಚಿತಾರ್ಥ, ವರನ ಬಗ್ಗೆ ತಿಳಿದರೆ ಅಚ್ಚರಿ ಪಡ್ತೀರಾ!

    KumarBy KumarJune 20, 2026Updated:June 20, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಕನ್ನಡ ಚಿತ್ರರಂಗದ ಖ್ಯಾತ ಹಾಗೂ ಗ್ಲಾಮರಸ್ ನಟಿ ಶರ್ಮಿಳಾ ಮಾಂಡ್ರೆ ಶೀಘ್ರದಲ್ಲೇ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದು, ತಮಿಳುನಾಡಿನ ಸೊಸೆಯಾಗಲಿದ್ದಾರೆ.

    ಮೂಲಗಳ ಪ್ರಕಾರ, ಕನ್ನಡ ಸೇರಿದಂತೆ ಹಲವು ಭಾಷೆಗಳ ಚಿತ್ರಗಳಲ್ಲಿ ಅಭಿನಯಿಸಿರುವ ಶರ್ಮಿಳಾ ಮಾಂಡ್ರೆ ಅವರ ನಿಶ್ಚಿತಾರ್ಥವು ಜೂನ್ 25ರಂದು ಕುಟುಂಬದ ಸದಸ್ಯರು ಮತ್ತು ಆಪ್ತರ ಸಮ್ಮುಖದಲ್ಲಿ ನಡೆಯಲಿದೆ.

    ಶರ್ಮಿಳಾ ಅವರು ತಮಿಳು ಚಿತ್ರರಂಗದ ಹೆಸರಾಂತ ನಿರ್ಮಾಪಕ ಸುಧನ್ ಸುಂದರಂ ಅವರನ್ನು ವಿವಾಹವಾಗಲಿದ್ದಾರೆ. ಸುಧನ್ ಅವರು ಸೂಪರ್ ಹಿಟ್ ಚಿತ್ರ ‘ಮಹಾರಾಜ’ದ ನಿರ್ಮಾಪಕರಾಗಿದ್ದು, ಆ ಸಿನಿಮಾ ಭಾರೀ ಯಶಸ್ಸು ಕಂಡಿತ್ತು.

    ಅದರ ಜೊತೆಗೆ, ಇತ್ತೀಚೆಗೆ ಯಶಸ್ಸು ಗಳಿಸಿದ ತಮಿಳು ಚಿತ್ರ ‘ತಾಕ್ ಕಿಳವಿ’ಯ ನಿರ್ಮಾಣದಲ್ಲೂ ಅವರು ಸಹ-ನಿರ್ಮಾಪಕರಾಗಿ ಕಾರ್ಯನಿರ್ವಹಿಸಿದ್ದಾರೆ. ಜೂನ್ 25ರಂದು ಇವರ ನಿಶ್ಚಿತಾರ್ಥ ನಡೆಯಲಿದ್ದು, ಇದೇ ವರ್ಷ ಮದುವೆಯೂ ನೆರವೇರುವ ಸಾಧ್ಯತೆ ಇದೆ.

    ಸುಧನ್ ಸುಂದರಂ ಅವರು ‘ಪ್ಯಾಷನ್ ಸ್ಟುಡಿಯೋಸ್’ ಎಂಬ ನಿರ್ಮಾಣ ಸಂಸ್ಥೆಯನ್ನು ನಡೆಸುತ್ತಿದ್ದು, ಚಿತ್ರ ನಿರ್ಮಾಣ ಹಾಗೂ ವಿತರಣಾ ಕ್ಷೇತ್ರದಲ್ಲಿ ಸಕ್ರಿಯರಾಗಿದ್ದಾರೆ.

    2007ರಲ್ಲಿ ಬಿಡುಗಡೆಯಾದ ‘ಸಜನಿ’ ಚಿತ್ರದ ಮೂಲಕ ಸಿನಿರಂಗ ಪ್ರವೇಶಿಸಿದ ಶರ್ಮಿಳಾ ಮಾಂಡ್ರೆ, ಕನ್ನಡ, ತೆಲುಗು ಮತ್ತು ತಮಿಳು ಭಾಷೆಗಳ ಅನೇಕ ಸಿನಿಮಾಗಳಲ್ಲಿ ಅಭಿನಯಿಸಿ ಪ್ರೇಕ್ಷಕರ ಮೆಚ್ಚುಗೆ ಪಡೆದಿದ್ದಾರೆ. ಪ್ರಸ್ತುತ ಅವರು ತಮಿಳಿನ ‘ಅದೃಷ್ಟಶಾಲಿ’ ಹಾಗೂ ಕನ್ನಡದ ‘ದಸರಾ’ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.

    ನಟಿ ಮಾತ್ರವಲ್ಲದೆ ನಿರ್ಮಾಪಕಿಯಾಗಿಯೂ ಗುರುತಿಸಿಕೊಂಡಿರುವ ಶರ್ಮಿಳಾ ಮಾಂಡ್ರೆ, ತಮಿಳಿನಲ್ಲಿ ಈಗಾಗಲೇ ನಾಲ್ಕು ಸಿನಿಮಾಗಳನ್ನು ನಿರ್ಮಿಸಿದ್ದಾರೆ. ಜೊತೆಗೆ ಕನ್ನಡದ ‘ದಸರಾ’ ಚಿತ್ರದ ನಿರ್ಮಾಣದಲ್ಲೂ ತೊಡಗಿಸಿಕೊಂಡಿದ್ದು, ತಮಿಳಿನ ‘ಕಾದಲ್ ಕೊಂಜಂ ತೂಕಲಾ’ ಸಿನಿಮಾವನ್ನೂ ನಿರ್ಮಿಸುತ್ತಿದ್ದಾರೆ.

    Post Views: 35
    Share. Facebook Twitter Pinterest LinkedIn Tumblr Email
    Kumar

    Related Posts

    ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್

    July 2, 2026

    ಚಿರಂಜೀವಿ ಜೊತೆ ಸಿನಿಮಾ ಮಾಡಲು ಧೈರ್ಯ ಸಾಲಲಿಲ್ಲವೇ? ರಾಮ್ ಗೋಪಾಲ್ ವರ್ಮಾ ಹೇಳಿದ ಮಾತು ಈಗ ವೈರಲ್.

    June 20, 2026

    ಜಯಮ್ಮ ಅಗಲಿಕೆಯ ಬೆನ್ನಲ್ಲೇ ಮತ್ತೊಂದು ದುಃಖದ ಸುದ್ದಿ: ಪವನ್ ಒಡೆಯರ್ ತಾಯಿ ವಿಧಿವಶ

    June 17, 2026
    Leave A Reply Cancel Reply

    Recent Posts

    • ರೇಣುಕಾಸ್ವಾಮಿ ಕೇಸ್‌ಗೆ ಬಿಗ್ ಟ್ವಿಸ್ಟ್; ಸಾಕ್ಷಿಗೆ ಬೆದರಿಕೆ ಆರೋಪದಲ್ಲಿ ದರ್ಶನ್ ಅಭಿಮಾನಿ ಬಳಗದ ಮೂವರು ಅರೆಸ್ಟ್
    • ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ
    • ಕ್ರಷರ್ ಬಂಡೆ ಕುಸಿದು ಭೀಕರ ದುರಂತ: 7 ಕಾರ್ಮಿಕರು ಸಾವು, ರಕ್ಷಣಾ ಕಾರ್ಯಾಚರಣೆ ಮುಂದುವರಿಕೆ!
    • ಬಿಡದಿ ಮೆಗಾ ಟೌನ್‌ಶಿಪ್‌ಗೆ ಹೈಕೋರ್ಟ್ ಕಂಟಕ: ಸರ್ಕಾರದ ಯೋಜನೆಗೆ ಆರಂಭದಲ್ಲೇ ತಣ್ಣೀರೆರಚಿದ ಪಿಐಎಲ್!
    • ವೈರಲ್ ವಿಡಿಯೋದಿಂದ ಬಯಲಾಯ್ತು ಪಿಎಸ್‌ಐನ ವಿಕೃತ ಕೃತ್ಯ; ಪೋಕ್ಸೋ ಅಡಿಯಲ್ಲಿ ಬಂಧನ

    Recent Comments

    No comments to show.

    Archives

    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.