ರಸ್ತೆಯಲ್ಲಿ ಹಲ್ಲೆ (ರೋಡ್ ರೇಜ್) ಪ್ರಕರಣದ ಸಂಬಂಧ ದೂರು ನೀಡಲು ತೆರಳಿದ್ದ ಮಹಿಳಾ ವಕೀಲೆ ಠಾಣೆಯಲ್ಲಿ ದಾಂದಲೆ ಎಬ್ಬಿಸಿದ್ದಾರೆ ಎಂದು ಬೂಟಿನ ಕಾಲಿನಲ್ಲಿ ಒದ್ದ ಮಹಿಳಾ ಪೊಲೀಸ್ ಅಧಿಕಾರಿಯ ವಿರುದ್ಧ ಪ್ರಕರಣ ದಾಖಲಿಸಲು ಕರ್ನಾಟಕ ಹೈಕೋರ್ಟ್ ಈಚೆಗೆ ಆದೇಶಿಸಿದೆ. ಬೆಂಗಳೂರಿನ ನಬೋನಿತಾ ಸೇನ್ ಅವರು ತಮ್ಮ ವಿರುದ್ಧ ಮೈಕೊ ಲೇಔಟ್ ಠಾಣೆಯಲ್ಲಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ನಡೆಸಿತು. “ಟೇಬಲ್ ಮೇಲಿನ ಕೆಲವು ದಾಖಲೆಗಳನ್ನು ಅರ್ಜಿದಾರೆ ಎಳೆದು ಬಿಸಾಡಿದರು ಎಂಬ ಕಾರಣಕ್ಕೆ ಪದ್ಮಾವತಿ ಅವರು ಸಕಾರಣವಿಲ್ಲದೇ ಬೂಟಿನ ಕಾಲಿನಲ್ಲಿ ಒದ್ದಿದ್ದಾರೆ ಎಂಬುದು ಠಾಣೆಯ ಸಿಸಿಟಿವಿ ದೃಶ್ಯಾವಳಿಯಿಂದ ಖಾತರಿಯಾಗಿದೆ. ಅದರೂ ಪದ್ಮಾವತಿ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಹೀಗಾಗಿ, ಇಂಥ ಕೃತ್ಯ ಎಸಗಿದ ಅಧಿಕಾರಿಗೆ ಇಲಾಖಾ ವಿಚಾರಣೆಯ ಮೂಲಕ ಎಚ್ಚರಿಕೆ ನೀಡುವುದಲ್ಲ, ಅವರ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು” ಎಂದು ಆದೇಶಿಸಿದೆ. ಅಲ್ಲದೇ, ವಕೀಲೆಯ ವಿರುದ್ಧದ ಪ್ರಕರಣಕ್ಕೂ…
Author: theprimevoicenews@gmail.com
ಭಾರತವು ತಂತ್ರಜ್ಞಾನದಲ್ಲಿ ಸ್ವಾವಲಂಬನೆಯತ್ತ ವೇಗವಾಗಿ ಸಾಗುತ್ತಿರುವ ಈ ಕಾಲಘಟ್ಟದಲ್ಲಿ, ಸೆಮಿಕಂಡಕ್ಟರ್ ಕ್ಷೇತ್ರದಲ್ಲಿ ದೊಡ್ಡ ಹೆಜ್ಜೆಯನ್ನು ಇಟ್ಟಿದೆ. ಪ್ರಧಾನಮಂತ್ರಿ Narendra Modi ಅವರು ಗುಜರಾತ್ನಲ್ಲಿ ₹3,300 ಕೋಟಿ ಮೌಲ್ಯದ ಸೆಮಿಕಂಡಕ್ಟರ್ ಘಟಕ ಯೋಜನೆಗೆ ಚಾಲನೆ ನೀಡಿರುವುದು ದೇಶದ ತಾಂತ್ರಿಕ ಭವಿಷ್ಯಕ್ಕೆ ಮಹತ್ವದ ತಿರುವಾಗಿದೆ.
ಕೃಷ್ಣ ರಾಜ ಸಾಗರ (ಕೆಆರ್ಎಸ್) ಅಣೆಕಟ್ಟಿಗೆ ಮೊದಲು ಅಡಿಪಾಯ ಹಾಕಿದವರು ಟಿಪ್ಪು ಸುಲ್ತಾನ್ (Tipu Sultan)ಎಂಬ ಕರ್ನಾಟಕ ಸಮಾಜ ಕಲ್ಯಾಣ ಮತ್ತು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್ಸಿ ಮಹದೇವಪ್ಪ (Minister HC Mahadevappa) ಅವರ ಹೇಳಿಕೆ ವಿವಾದಕ್ಕೆ ಕಾರಣ ಆಗಿದೆ. ಶ್ರೀರಂಗಪಟ್ಟಣದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನಕ್ಕೆ ಶಿಲಾನ್ಯಾಸ ನೆರವೇರಿಸಿದ ನಂತರ, ಮಹಾದೇವಪ್ಪ, “ಟಿಪ್ಪು ಸುಲ್ತಾನ್ ಶಿಲಾನ್ಯಾಸ ಮಾಡಿದರು, ಆದರೆ ಇದನ್ನು ಒಪ್ಪಿಕೊಳ್ಳಲು ಯಾರೂ ಧೈರ್ಯ ಮಾಡುವುದಿಲ್ಲ. ಕೆ.ಆರ್.ಎಸ್. ಅಣೆಕಟ್ಟಿನ ಮುಖ್ಯ ದ್ವಾರದಲ್ಲಿ ಇದಕ್ಕೆ ಸ್ಪಷ್ಟ ಪುರಾವೆಗಳಿವೆ” ಎಂದು ಹೇಳಿದರು. ಇತಿಹಾಸವನ್ನು ಅರ್ಥಮಾಡಿಕೊಳ್ಳದವರು ಇತಿಹಾಸವನ್ನು ಸೃಷ್ಟಿಸಲು ಸಾಧ್ಯವಿಲ್ಲ. ಟಿಪ್ಪು ಜಾತ್ಯತೀತ ಆಡಳಿತಗಾರ. ಮಸೀದಿ ಮತ್ತು ದೇವಸ್ಥಾನ ಪಕ್ಕದಲ್ಲೇ ಇವೆ. ಮಸೀದಿಯಲ್ಲಿ ಅಲ್ಲಾಹು ಅಕ್ಬರ್ ಎಂಬ ಘೋಷಣೆ ಕೇಳಿಬರುತ್ತದೆ ಮತ್ತು ದೇವಸ್ಥಾನದ ಗಂಟೆಗಳು ಒಂದೇ ಸಮಯದಲ್ಲಿ ಮೊಳಗುತ್ತವೆ. ಟಿಪ್ಪು ಶಾಂತತೆ ಮತ್ತು ಸ್ವೀಕಾರದಿಂದ ಎರಡನ್ನೂ ಆಲಿಸಿದನು ಎಂದು ಹೇಳಿದರು.
ಬೆಂಗಳೂರು:- ಕರ್ನಾಟಕದಾದ್ಯಂತ ಇಂದು ಜೋರು ಗಾಳಿಯೊಂದಿಗೆ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಎಲ್ಲೆಲ್ಲಿ ಮಳೆ? ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಮಳೆಯಾಗುವ ಸಂಭವ ಇದೆ. ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ದಕ್ಷಿಣ ಒಳನಾಡು ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಇಂದು ಬಹುತೇಕ ಸ್ಥಳಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.