ಬೆಂಗಳೂರು: ಆರ್ಎಸ್ಎಸ್ ನೋಂದಣಿ ವಿಚಾರವಾಗಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬರೆದಿದ್ದ ಬಹಿರಂಗ ಪತ್ರಕ್ಕೆ ಸಂಘದ ಸರಸಂಘಚಾಲಕ ಮೋಹನ್ ಭಾಗವತ್ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಕೇರಳದ ತ್ರಿಶೂರ್ನಲ್ಲಿ ಆಯೋಜಿಸಿದ್ದ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್ಎಸ್ಎಸ್ ಯಾವುದೇ ರಹಸ್ಯ ಸಂಘಟನೆ ಅಲ್ಲ ಎಂದು ಸ್ಪಷ್ಟಪಡಿಸಿದರು. “ಸಂಘದ ಎಲ್ಲಾ ಚಟುವಟಿಕೆಗಳು ಸಾರ್ವಜನಿಕವಾಗಿ ನಡೆಯುತ್ತವೆ. ನಮ್ಮ ಕಾರ್ಯಕರ್ತರು ಸಮಾಜದ ಮಧ್ಯೆಯೇ ನಿರಂತರವಾಗಿ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ” ಎಂದು ಅವರು ಹೇಳಿದರು. ಆರ್ಎಸ್ಎಸ್ ನೋಂದಣಿ ಕುರಿತ ಪ್ರಶ್ನೆಗೆ ಉತ್ತರಿಸಿದ ಭಾಗವತ್, ಈ ವಿಚಾರವನ್ನು ರಾಜಕೀಯ ಪ್ರೇರಿತ ನಡೆ ಎಂದು ಬಣ್ಣಿಸಿದರು. “ಇಂತಹ ಆರೋಪಗಳು ನಮಗೆ ಹೊಸದೇನಲ್ಲ. ಹಲವು ದಶಕಗಳಿಂದ ಇಂಥ ಟೀಕೆಗಳನ್ನು ಎದುರಿಸುತ್ತಿದ್ದೇವೆ. ಜನರಲ್ಲಿ ಗೊಂದಲ ಮತ್ತು ಅನುಮಾನ ಸೃಷ್ಟಿಸಲು ಈ ರೀತಿಯ ಪ್ರಯತ್ನಗಳು ನಡೆಯುತ್ತಿವೆ” ಎಂದು ತಿಳಿಸಿದರು. ಸರ್ಕಾರದ ಅನುದಾನ ಪಡೆಯುವ ಸಂಸ್ಥೆಗಳಿಗೆ ಮಾತ್ರ ನೋಂದಣಿ ಅಗತ್ಯವಿರುತ್ತದೆ ಎಂದು ಹೇಳಿದ ಅವರು, “ಹಿಂದೂ ಧರ್ಮವೇ ಯಾವುದಾದರೂ ಕಾನೂನುಬದ್ಧವಾಗಿ ನೋಂದಣಿಯಾಗಿದೆಯೇ?” ಎಂದು ಪ್ರಶ್ನಿಸುವ ಮೂಲಕ ತಮ್ಮ…
Author: The Prime Voice
ನವದೆಹಲಿ: ಭಾರತದಲ್ಲಿ ಟೆಲಿಗ್ರಾಮ್ ಆ್ಯಪ್ (Telegram) ಮೇಲಿನ ನಿರ್ಬಂಧಕ್ಕೆ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ. ಈ ದಿಢೀರ್ ನಿರ್ಧಾರದ ಹಿಂದೆ ಮಹತ್ವದ ಕಾರಣವಿದ್ದು, ಯಾವುದೇ ಅಕ್ರಮ ಚಟುವಟಿಕೆಗಳಿಗೆ ಅವಕಾಶ ಸಿಗದಂತೆ ತಡೆಯುವ ಉದ್ದೇಶದಿಂದ ಸರ್ಕಾರ ಈ ಕ್ರಮ ಕೈಗೊಂಡಿದೆ. ದೇಶದಲ್ಲಿ ಜೂನ್ 22ರವರೆಗೆ ನೀಟ್ (NEET) ಮರುಪರೀಕ್ಷೆ ನಡೆಯಲಿರುವ ಹಿನ್ನೆಲೆ, ಪ್ರಶ್ನೆಪತ್ರಿಕೆ ಸೋರಿಕೆ ಸೇರಿದಂತೆ ಪರೀಕ್ಷಾ ಪ್ರಕ್ರಿಯೆಗೆ ಅಡ್ಡಿಯಾಗುವ ಯಾವುದೇ ಕೃತ್ಯಗಳನ್ನು ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ. ತ್ವರಿತ ಸಂದೇಶ ರವಾನೆಗೆ ಪ್ರಸಿದ್ಧವಾಗಿರುವ ಟೆಲಿಗ್ರಾಮ್ ಆ್ಯಪ್ನಲ್ಲಿ ಕಳೆದ ಬಾರಿಯೂ ನೀಟ್ ಪ್ರಶ್ನೆಪತ್ರಿಕೆಗಳು ವ್ಯಾಪಕವಾಗಿ ಹರಿದಾಡಿದ್ದವು. ಹೀಗಾಗಿ ಈ ಬಾರಿ ಯಾವುದೇ ರೀತಿಯ ಪ್ರಶ್ನೆಪತ್ರಿಕೆ ಸೋರಿಕೆಗೆ ಅವಕಾಶವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರ ಸರ್ಕಾರ ಜೂನ್ 22ರವರೆಗೆ ಟೆಲಿಗ್ರಾಮ್ ಆ್ಯಪ್ಗೆ ನಿರ್ಬಂಧ ಹೇರಿದೆ. ಅಲ್ಲದೆ, ಜೂನ್ 30ರವರೆಗೆ ಟೆಲಿಗ್ರಾಮ್ನಲ್ಲಿ ಸಂದೇಶ ಕಳುಹಿಸುವ ಸೌಲಭ್ಯವನ್ನು ಸಹ ನಿಷ್ಕ್ರಿಯಗೊಳಿಸಲಾಗಿದೆ.
ಜೋರ್ಹತ್: ಅಸ್ಸಾಂನ ಜೋರ್ಹತ್ನಲ್ಲಿರುವ ವಾಯುಪಡೆ (AN-32 Aircraft Accident) ನಿಲ್ದಾಣದ ಬಳಿ ಶನಿವಾರ ಬೆಳಿಗ್ಗೆ ಭಾರತೀಯ ವಾಯುಪಡೆಯ (IAF) ಸಾರಿಗೆ ವಿಮಾನವೊಂದು ಅಪಘಾತಕ್ಕೀಡಾಗಿದೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ. ವಿಮಾನವನ್ನು ಎಎನ್ -32 ಎಂದು ಗುರುತಿಸಲಾಗಿದ್ದು, ರೌರಿಯಾ ಪ್ರದೇಶದಲ್ಲಿ ಇಳಿಯುವಾಗ ಅಪಘಾತಕ್ಕೀಡಾಗಿದೆ. ಪೈಲಟ್ಗಳ ಬಗ್ಗೆ ಈ ಕ್ಷಣಕ್ಕೆ ಇನ್ನೂ ಯಾವುದೇ ಮಾಹಿತಿ ತಿಳಿದು ಅಪಘಾತದ ನಂತರ ವಿಮಾನವು ಭಾಗಶಃ ಬೆಂಕಿಗೆ ಆಹುತಿಯಾಗಿದೆ ಎಂದು ವರದಿಗಳು ಹೇಳುತ್ತಿದ್ದು, ಅಧಿಕಾರಿಗಳು ಪರಿಸ್ಥಿತಿಯನ್ನು ಪರಿಶೀಲಿಸಿ ಪರಿಸ್ಥಿತಿಯನ್ನು ನಿರ್ಣಯಿಸುವ ಸಾಧ್ಯತೆಯಿದೆ. ಒಂದು ವರ್ಷದಲ್ಲಿ ಅಪಘಾತಕ್ಕೀಡಾದ ಎರಡನೇ AN-32 ಇದಾಗಿದ್ದು, ಕಳೆದ ವರ್ಷ ಮಾರ್ಸಿ 7 ರಂದು, ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯ ಬಾಗ್ಡೋಗ್ರಾದಲ್ಲಿ AN-32 ಅಪಘಾತಕ್ಕೀಡಾಯಿತು. ಆದರೆ, ಸಿಬ್ಬಂದಿ ಸುರಕ್ಷಿತವಾಗಿದ್ದರು ಮತ್ತು ಆ ಘಟನೆಯಲ್ಲಿ ಯಾರೂ ಪ್ರಾಣ ಕಳೆದುಕೊಂಡಿರಲಿಲ್ಲ. 1980 ರ ದಶಕದ ಸೋವಿಯತ್ ಯುಗದ ಅವಳಿ-ಎಂಜಿನ್ ಟರ್ಬೊಪ್ರೊಪ್ ಮತ್ತು ಸಾರಿಗೆ ವಿಮಾನವಾದ AN-32, ಅತ್ಯಂತ ಕಠಿಣ ವಾತಾವರಣದಲ್ಲಿ ಸರಕು ಸರಬರಾಜುಗಳನ್ನು ಸಾಗಿಸಲು ಹೆಚ್ಚಾಗಿ ಬಳಸಲಾಗುವ ಈ…
ಚೆನ್ನೈ: ತಮಿಳು ಸ್ಟಾರ್ ನಟ ಅಜಿತ್ ಕುಮಾರ್ ಅವರ ಬಹುನಿರೀಕ್ಷಿತ ‘AK64’ ಸಿನಿಮಾ ಇನ್ನೂ ಅಧಿಕೃತವಾಗಿ ಘೋಷಣೆಯಾಗದಿರುವುದಕ್ಕೆ ಸಂಭಾವನೆ ವಿಚಾರವೇ ಪ್ರಮುಖ ಕಾರಣ ಎಂಬ ಮಾಹಿತಿ ಚಿತ್ರರಂಗದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಕಳೆದ ಕೆಲವು ಚಿತ್ರಗಳ ನಿರೀಕ್ಷಿತ ಯಶಸ್ಸು ಸಿಗದ ಹಿನ್ನೆಲೆಯಲ್ಲಿ ಅಜಿತ್ ತಮ್ಮ ಸಂಭಾವನೆಯನ್ನು ಕಡಿತಗೊಳಿಸಲು ಮುಂದಾಗಿದ್ದರೂ, ನಿರ್ಮಾಪಕರು ಇನ್ನಷ್ಟು ಇಳಿಕೆ ಮಾಡುವಂತೆ ಒತ್ತಡ ಹೇರುತ್ತಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ, ಈ ಹಿಂದೆ 170 ರಿಂದ 200 ಕೋಟಿ ರೂ.ವರೆಗೆ ಸಂಭಾವನೆ ಪಡೆದಿದ್ದ ಅಜಿತ್, ಹೊಸ ಚಿತ್ರದಿಗಾಗಿ ಸುಮಾರು 150 ಕೋಟಿ ರೂ.ಗೆ ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಯನ್ನು ಉಲ್ಲೇಖಿಸುತ್ತಿರುವ ನಿರ್ಮಾಣ ಸಂಸ್ಥೆಗಳು ಈ ಮೊತ್ತವನ್ನು ಹೆಚ್ಚೆಂದು ಪರಿಗಣಿಸುತ್ತಿವೆ. ತಮಿಳಿನ ಪ್ರಮುಖ ನಿರ್ಮಾಣ ಸಂಸ್ಥೆಯೊಂದು ಅಜಿತ್ ಜೊತೆ ಮಾತುಕತೆ ನಡೆಸಿದರೂ, ಸಂಭಾವನೆ ವಿಚಾರದಲ್ಲಿ ಒಮ್ಮತ ಮೂಡದ ಕಾರಣ ಪ್ರಾಜೆಕ್ಟ್ ಮುಂದುವರಿದಿಲ್ಲ ಎಂದು ಹೇಳಲಾಗುತ್ತಿದೆ. ಆ ಸಂಸ್ಥೆ ಗರಿಷ್ಠ 90 ಕೋಟಿ ರೂ. ನೀಡಲು ಮಾತ್ರ ಸಿದ್ಧವಿದೆ ಎನ್ನಲಾಗಿದೆ. ಮತ್ತೊಂದು…
ಮುಂಬೈ: ಬಾಲಿವುಡ್ ನಟಿ ಹಾಗೂ ಬಿಜೆಪಿ ಸಂಸದೆ ಕಂಗನಾ ರಣಾವತ್ ಮತ್ತೊಮ್ಮೆ ತಮ್ಮ ವಿವಾದಾತ್ಮಕ ಹೇಳಿಕೆಯಿಂದ ಸುದ್ದಿಯಾಗಿದ್ದಾರೆ. ನಟ ರಣವೀರ್ ಸಿಂಗ್ ವಿರುದ್ಧ ನಡೆಯುತ್ತಿರುವ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಚಿತ್ರರಂಗದ ಕೆಲವರು ಪಾಕಿಸ್ತಾನ ಪರ ಮನೋಭಾವ ಹೊಂದಿದ್ದು, ದೇಶಪ್ರೇಮದ ಸಿನಿಮಾಗಳನ್ನು ಮಾಡುವವರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ‘ಡಾನ್ 3’ ಚಿತ್ರದ ವಿವಾದದ ನಡುವೆ ರಣವೀರ್ ಸಿಂಗ್ ವಿರುದ್ಧ ಎಫ್ಡಬ್ಲ್ಯುಐಸಿಇ ಅಸಹಕಾರದ ನಿರ್ದೇಶನ ಹೊರಡಿಸಿದ್ದ ಹಿನ್ನೆಲೆ, ಅವರ ಪರವಾಗಿ ಮಾತನಾಡಿದ ಕಂಗನಾ, ಬಾಲಿವುಡ್ನ ಒಂದು ವರ್ಗ ದಶಕಗಳಿಂದ ಪಾಕಿಸ್ತಾನದ ಬಗ್ಗೆ ಮೃದು ಧೋರಣೆಯ ಚಿತ್ರಣ ಕಟ್ಟಿಕೊಂಡು ಬಂದಿದೆ ಎಂದು ಟೀಕಿಸಿದ್ದಾರೆ. ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಪಾಕಿಸ್ತಾನದ ಭಯೋತ್ಪಾದಕ ಜಾಲದ ವಿರುದ್ಧದ ಕಥಾಹಂದರ ಹೊಂದಿದ್ದ ‘ಧುರಂಧರ್’ ಚಿತ್ರದ ಯಶಸ್ಸಿನ ಬಳಿಕವೇ ರಣವೀರ್ ಸಿಂಗ್ ಅವರನ್ನು ಗುರಿಯಾಗಿಸಲಾಗುತ್ತಿದೆ ಎಂದು ಹೇಳಿದ್ದಾರೆ. ದೇಶಭಕ್ತಿಯ ಕಥಾಹಂದರ ಹೊಂದಿರುವ ಸಿನಿಮಾಗಳು ಯಶಸ್ವಿಯಾಗುತ್ತಿರುವುದನ್ನು ಸಹಿಸದ ಕೆಲವು ಶಕ್ತಿಗಳು ಇಂತಹ ವಿವಾದಗಳನ್ನು ಸೃಷ್ಟಿಸುತ್ತಿವೆ ಎಂದು ಕಂಗನಾ…
ಧಾರವಾಡ: ಧಾರವಾಡ ಕೇಂದ್ರ ಕಾರಾಗೃಹದ ಜೈಲರ್ ಸಿದ್ದರಾಮಪ್ಪ ವಡ್ಡರ (37) ಅವರು ತಮ್ಮ ವಸತಿಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮಾಹಿತಿಯ ಪ್ರಕಾರ, ಕೆಲವು ತಿಂಗಳುಗಳ ಹಿಂದೆ ಆಡಳಿತಾತ್ಮಕ ಕಾರಣಗಳಿಂದ ಸಿದ್ದರಾಮಪ್ಪ ಅವರನ್ನು ಅಮಾನತುಗೊಳಿಸಿ ಮೈಸೂರು ಕಾರಾಗೃಹಕ್ಕೆ ವರ್ಗಾವಣೆ ಮಾಡಲಾಗಿತ್ತು. ಆದರೆ ಅವರು ಮೈಸೂರಿನಲ್ಲಿ ಕರ್ತವ್ಯಕ್ಕೆ ಹಾಜರಾಗದೆ ಧಾರವಾಡದಲ್ಲೇ ಉಳಿದುಕೊಂಡಿದ್ದರು ಎನ್ನಲಾಗಿದೆ. ಧಾರವಾಡದ ಹೊಸ ಬಸ್ ನಿಲ್ದಾಣದ ಸಮೀಪದ ವಸತಿಗೃಹದಲ್ಲಿ ಯಾರೂ ಇಲ್ಲದ ವೇಳೆ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬ ಸದಸ್ಯರು ಹಲವು ಬಾರಿ ಕರೆ ಮಾಡಿದರೂ ಅವರು ಫೋನ್ ಸ್ವೀಕರಿಸದ ಹಿನ್ನೆಲೆಯಲ್ಲಿ ಅನುಮಾನಗೊಂಡು ಪರಿಶೀಲನೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಈ ಘಟನೆಗೆ ಸಂಬಂಧಿಸಿದಂತೆ ಕುಟುಂಬಸ್ಥರು ಗಂಭೀರ ಆರೋಪಗಳನ್ನು ಮಾಡಿದ್ದು, ಡಿಜಿಪಿ ಅವರಿಂದ ನಿರಂತರ ಬೆದರಿಕೆ ಹಾಗೂ ಮಾನಸಿಕ ಒತ್ತಡ ಎದುರಿಸುತ್ತಿದ್ದರು ಎಂದು ಹೇಳಿದ್ದಾರೆ. ಇದೇ ಕಾರಣದಿಂದ ಸಿದ್ದರಾಮಪ್ಪ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಕುಟುಂಬದವರು ಆರೋಪಿಸಿದ್ದಾರೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸುಕೊ…
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಮಧುಸೂದನ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರ ಭೂ ದಾಖಲೆ (ಪೋಡಿ) ಸಂಬಂಧಿತ ಕೆಲಸವನ್ನು ಮಾಡಿಕೊಡುವುದಾಗಿ ಹೇಳಿ, ಮಧುಸೂದನ್ ಅವರು ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಮೊತ್ತದ ಭಾಗವಾಗಿ 10,000 ರೂ. ಮುಂಗಡ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು. ಹಲಗೂರಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ರೈತರಿಂದ ಲಂಚದ ಹಣವನ್ನು ಕೈಗೆತ್ತಿಕೊಂಡು ಜೇಬಿಗೆ ಇಡುತ್ತಿದ್ದ ವೇಳೆ ಮಧುಸೂದನ್ ಅವರನ್ನು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧ ಮುಂದಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೊಂಡಿದ್ದಾರೆ.
ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಕರ್ನಾಟಕಕ್ಕೆ ಭೇಟಿ ನೀಡಿ, ಉಡುಪಿ ಜಿಲ್ಲೆಯ ಪ್ರಸಿದ್ಧ ಕೊಲ್ಲೂರು ಶ್ರೀ ಮೂಕಾಂಬಿಕೆ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅವರು ದೇವಿಗೆ 1 ಕೆಜಿ 600 ಗ್ರಾಂ ತೂಕದ ಬೆಳ್ಳಿ ಕಡಗವನ್ನು ಕಾಣಿಕೆಯಾಗಿ ಅರ್ಪಿಸಿ ಭಕ್ತಿಭಾವವನ್ನು ವ್ಯಕ್ತಪಡಿಸಿದರು. ಮಧ್ಯಾಹ್ನ ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ವಿಜಯ್ ಅವರು, ನಂತರ ರಸ್ತೆ ಮಾರ್ಗವಾಗಿ ಕೊಲ್ಲೂರಿಗೆ ಪ್ರಯಾಣ ಬೆಳೆಸಿದರು. ದೇವಸ್ಥಾನಕ್ಕೆ ಆಗಮಿಸಿದ ಬಳಿಕ ಸಂಪ್ರದಾಯಕ್ಕೆ ಅನುಗುಣವಾಗಿ ಶರ್ಟ್ ಹಾಗೂ ಬನಿಯನ್ ತೆಗೆದು, ಕೇವಲ ಲುಂಗಿ ಮತ್ತು ಶಲ್ಯ ಧರಿಸಿ ದೇವಿಯ ದರ್ಶನ ಪಡೆದರು. ಅವರು ಸಂಕಲ್ಪ ಪೂಜೆಯಲ್ಲಿ ಭಾಗವಹಿಸಿ ಸುಮಾರು 20 ನಿಮಿಷಗಳ ಕಾಲ ದೇವಾಲಯದಲ್ಲಿ ಕಳೆದರು. ಕೊಲ್ಲೂರು ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಬಾಬು ಹೆಗ್ಡೆ ಅವರ ಮಾಹಿತಿ ಪ್ರಕಾರ, ವಿಜಯ್ ಅವರು ದೇವಿಗೆ 1.6 ಕೆಜಿ ತೂಕದ ಬೆಳ್ಳಿ ಕಡಗವನ್ನು ಸಮರ್ಪಿಸಿದ್ದಾರೆ.…
ಬೆಂಗಳೂರು: ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಬೆಳವಣಿಗೆಗಳು ಗಮನ ಸೆಳೆಯುತ್ತಿವೆ. ಪ್ರಕರಣದ ಪ್ರಮುಖ ಆರೋಪಿ ಚಿನ್ನಯ್ಯ, ಕೆಲ ಪ್ರಭಾವಿ ವ್ಯಕ್ತಿಗಳು ತನ್ನ ಮೇಲೆ ಒತ್ತಡ ಹೇರಿದ್ದು, ಧರ್ಮಸ್ಥಳದ ವಿರುದ್ಧ ಸಂಚು ರೂಪಿಸಲಾಗಿದೆ ಎಂದು ಆರೋಪಿಸಿದ್ದಾನೆ. ಇದೇ ವೇಳೆ, ಹೈಕೋರ್ಟ್ಗೆ ಸಲ್ಲಿಸಿರುವ ಅರ್ಜಿಯಲ್ಲಿ ನಟ ಪ್ರಕಾಶ್ ರಾಜ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ ಎಂಬ ಮಾಹಿತಿ ಹೊರಬಿದ್ದಿದ್ದು, ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ಈ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿದ ನಟ ಪ್ರಕಾಶ್ ರಾಜ್, ತಮ್ಮ ವಿರುದ್ಧ ಹರಡುತ್ತಿರುವ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿಹಾಕಿದ್ದಾರೆ. ತಮ್ಮ ಹೆಸರು ಪ್ರಕರಣದೊಂದಿಗೆ ಜೋಡಿಸಲಾಗುತ್ತಿರುವುದು ಆಧಾರರಹಿತ ಹಾಗೂ ಸುಳ್ಳು ಸುದ್ದಿ ಎಂದು ಅವರು ಸ್ಪಷ್ಟಪಡಿಸಿದ್ದಾರೆ. “ಧರ್ಮಸ್ಥಳ ಪ್ರಕರಣದ ವಿಚಾರವಾಗಿ ಮಾಧ್ಯಮಗಳು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ನನ್ನ ಹೆಸರು ಪ್ರಸ್ತಾಪವಾಗುತ್ತಿದೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಷಯವಾಗಿದೆ. ನಾನು ಪ್ರಸ್ತುತ ಊರಿನ ಹೊರಗಿದ್ದೇನೆ. ಇನ್ನೆರಡು ದಿನಗಳಲ್ಲಿ ಈ ಬಗ್ಗೆ ಸ್ವತಃ ಸ್ಪಷ್ಟನೆ ನೀಡುತ್ತೇನೆ. ದಯವಿಟ್ಟು ಯಾವುದೇ…
ಬೆಂಗಳೂರು (Bengaluru) ನಗರದ ಕಾಡುಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ಮಗು ಕೊಲೆ ಪ್ರಕರಣ (Child Murder Case) ಇದೀಗ ದೊಡ್ಡ ವಿವಾದಕ್ಕೆ ಕಾರಣವಾಗಿದೆ. ತಾಯಿ ಮತ್ತು ಆಕೆಯ ಪ್ರಿಯಕರನಿಂದಲೇ ಮಗುವನ್ನು ಹತ್ಯೆ ಮಾಡಿದ್ದ ಪ್ರಕರಣ ಸಂಬಂಧ ಮೂವರು ಪೊಲೀಸ್ ಅಧಿಕಾರಿಗಳನ್ನು ಸಸ್ಪೆಂಡ್ (Suspend) ಮಾಡಲಾಗಿದೆ. ಈ ಪ್ರಕರಣದಲ್ಲಿ ಪೊಲೀಸರಿಂದ ತನಿಖಾ ಲೋಪ ನಡೆದಿದೆ ಎಂದು ಪತ್ತೆಯಾದ ನಂತರ, ಮೂವರು ಪೊಲೀಸರನ್ನು ಅಮಾನತುಗೊಳಿಸಿರುವ ಬಗ್ಗೆ ನಗರ ಪೊಲೀಸ್ ಆಯುಕ್ತ ಸೀಮಾಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ. ಮಾರ್ಚ್ ತಿಂಗಳಲ್ಲಿ ಈ ವೆನ್ನೆಲಾ ಎಂಬ ಮಗು ಸಾವನಪ್ಪಿತ್ತು. ಆಗ ಈ ಪ್ರಕರಣವನ್ನು ಸಾಮಾನ್ಯ ಮರಣ (UDR – Unnatural Death Report) ಎಂದು ದಾಖಲಿಸಲಾಗಿತ್ತು. ಅಂದರೆ, ಮರಣದ ಕುರಿತು ಸಂಶಯಾಸ್ಪದ ಪರಿಸ್ಥಿತಿ ಇದ್ದರೂ, ಅದನ್ನು ಕೊಲೆ ಪ್ರಕರಣವಾಗಿ ಆಗಲೇ ಪರಿಗಣಿಸಲಾಗಿಲ್ಲ. ಹೀಗಾಗಿ ಪೊಲೀಸರಿಂದ ತನಿಖಾ ಲೋಪ ಎಂದು ಹೇಳಲಾಗಿದೆ. ಕೇಸ್ನಲ್ಲಿ ತನಿಖೆ ಲೋಪ, ಮೂವರು ಅಧಿಕಾರಿಗಳು ಸಸ್ಪೆಂಡ್! ಸದ್ಯ ಹೆಚ್ಚಿನ ಮಾಹಿತಿ ಮತ್ತು…