Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»District»ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ
    District

    ಆರ್‌ಎಸ್‌ಎಸ್‌ ರಾಷ್ಟ್ರೀಯ ಶಕ್ತಿ ಸಮಾವೇಶಕ್ಕೆ ಬೆಳಗಾವಿ ಸಜ್ಜು; ಜುಲೈ 10ರಿಂದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ಮಹತ್ವದ ಸಭೆ

    The Prime VoiceBy The Prime VoiceJuly 2, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಳಗಾವಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಶತಮಾನೋತ್ಸವದ ಹಿನ್ನೆಲೆಯಲ್ಲಿ ಸಂಘದ ಅತ್ಯಂತ ಮಹತ್ವದ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆಗೆ ಬೆಳಗಾವಿ ಆತಿಥ್ಯ ವಹಿಸುತ್ತಿದೆ. ಜುಲೈ 10ರಿಂದ 12ರವರೆಗೆ ಮೂರು ದಿನಗಳ ಕಾಲ ನಡೆಯಲಿರುವ ಈ ಸಭೆಯಲ್ಲಿ ದೇಶದ ವಿವಿಧ ಭಾಗಗಳಿಂದ ಸಂಘದ ಉನ್ನತ ಮಟ್ಟದ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.

    ಕಳೆದ ಮಾರ್ಚ್‌ನಲ್ಲಿ ಹರಿಯಾಣದ ಸಮಾಲ್ಖಾದಲ್ಲಿ ನಡೆದ ರಾಷ್ಟ್ರೀಯ ಸಭೆಯ ಬಳಿಕ ನಡೆಯುತ್ತಿರುವ ಈ ಸಭೆಗೆ ವಿಶೇಷ ಮಹತ್ವ ದೊರೆತಿದೆ. ದೇಶದ 46 ಪ್ರಾಂತಗಳ ಪ್ರಾಂತ ಪ್ರಚಾರಕರು, ಸಹ ಪ್ರಾಂತ ಪ್ರಚಾರಕರು, ಕ್ಷೇತ್ರ ಹಾಗೂ ಸಹ ಕ್ಷೇತ್ರ ಪ್ರಚಾರಕರು, ಸಂಘಟನಾ ವ್ಯವಸ್ಥೆಯ 11 ಕ್ಷೇತ್ರಗಳ ಪ್ರಮುಖರು ಸೇರಿದಂತೆ ನೂರಾರು ಹಿರಿಯ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ. ಇದರ ಜೊತೆಗೆ ಸಂಘ ಪ್ರೇರಿತ 32 ವಿವಿಧ ಸಂಘಟನೆಗಳ ಪ್ರಧಾನ ಕಾರ್ಯದರ್ಶಿಗಳೂ ಸಭೆಯಲ್ಲಿ ಭಾಗವಹಿಸಲಿದ್ದಾರೆ.

    ಸಭೆಯಲ್ಲಿ ಆರ್‌ಎಸ್‌ಎಸ್‌ ಶತಮಾನೋತ್ಸವದ ಕಾರ್ಯಯೋಜನೆ, ದೇಶಾದ್ಯಂತ ಶಾಖೆಗಳ ವಿಸ್ತರಣೆ, ಸಂಘಟನೆಯ ಬಲವರ್ಧನೆ ಹಾಗೂ ಮುಂದಿನ ದಿನಗಳ ರಾಷ್ಟ್ರೀಯ ಕಾರ್ಯಕ್ರಮಗಳ ಕುರಿತು ಮಹತ್ವದ ಚರ್ಚೆಗಳು ನಡೆಯಲಿವೆ.

    ಸಭೆಯ ನೇತೃತ್ವ ವಹಿಸಲು ಆರ್‌ಎಸ್‌ಎಸ್‌ ಸರಸಂಘಚಾಲಕ ಮೋಹನ್ ಭಾಗವತ್ ಜುಲೈ 6ರಂದೇ ಬೆಳಗಾವಿಗೆ ಆಗಮಿಸಲಿದ್ದು, ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ಸೇರಿದಂತೆ ಹಲವು ರಾಷ್ಟ್ರೀಯ ನಾಯಕರು ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಉನ್ನತ ಮಟ್ಟದ ನಾಯಕರು ಭಾಗವಹಿಸುವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್‌ ಕೈಗೊಳ್ಳಲಾಗಿದೆ.

    Post Views: 77
    Belagavi Latest News Belagavi News Belagavi RSS Meeting Belgaum RSS National Power Conference breaking news Dattatreya Hosabale India News Karnataka News Mohan Bhagwat National Conference Karnataka Rashtriya Swayamsevak Sangh RSS Belagavi News RSS Centenary RSS Leaders Meeting RSS National Conference 2026 RSS National Meeting RSS Prant Pracharak Baithak Sangh Shatabdi The Prime Voice News
    Share. Facebook Twitter Pinterest LinkedIn Tumblr Email
    Avatar photo
    The Prime Voice
    • Website

    Related Posts

    2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.

    September 3, 2026

    ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.

    September 3, 2026

    ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    September 2, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.