ತಾವರೆಕೆರೆ: ಕ್ರಷರ್ ಬಂಡೆ ಕೆಲಸದ ವೇಳೆ ಭೀಕರ ದುರ್ಘಟನೆ ಸಂಭವಿಸಿ 7 ಕಾರ್ಮಿಕರು ಸಾವನ್ನಪ್ಪಿದ ಘಟನೆ ತಾವರೆಕೆರೆ ಪೊಲೀಸ್ ಠಾಣೆ ವ್ಯಾಪ್ತಿಯ ಮಾದಪಟ್ಟಣ ಗ್ರಾಮದಲ್ಲಿ ನಡೆದಿದೆ.

ಮಾಹಿತಿಯ ಪ್ರಕಾರ, ಕಾವೇರಿ ಕಂಪನಿಗೆ ಸೇರಿದ ಕ್ರಷರ್ ಘಟಕದಲ್ಲಿ ಇಂದು ಬೆಳಿಗ್ಗೆ ಕೆಲಸ ನಡೆಯುತ್ತಿದ್ದ ವೇಳೆ ಮೇಲಿನಿಂದ ಬೃಹತ್ ಬಂಡೆ ಕುಸಿದು ಕೆಳಗೆ ಕೆಲಸ ಮಾಡುತ್ತಿದ್ದ ಕಾರ್ಮಿಕರ ಮೇಲೆ ಬಿದ್ದಿದೆ. ಈ ವೇಳೆ ಸ್ಥಳದಲ್ಲೇ 7 ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಇನ್ನೂ ಇಬ್ಬರು ಕಾರ್ಮಿಕರು ಬಂಡೆ ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಇಟಾಚಿ ಯಂತ್ರದ ಮೂಲಕ ಕೆಲಸ ನಡೆಯುತ್ತಿದ್ದಾಗಲೇ ಮೇಲಿನ ಬಂಡೆ ಸಡಿಲಾಗಿ ಕುಸಿತ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದುಬಂದಿದೆ.

ಘಟನೆ ನಡೆದ ಸ್ಥಳಕ್ಕೆ ತಾವರೆಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಕ್ಷಣಾ ತಂಡಗಳು ಕಾರ್ಯಾಚರಣೆ ತೀವ್ರಗೊಳಿಸಿದ್ದು, ಹೆಚ್ಚಿನ ವಿವರಗಳು ಇನ್ನಷ್ಟೇ ನಿರೀಕ್ಷೆಯಲ್ಲಿವೆ.

Share.
Leave A Reply

Exit mobile version