Close Menu
    Facebook X (Twitter) Instagram
    The Prime Voice
    • Home
    • Politics
    • Sports
    • Crime
    • District
    • Entertainment
    • English
      • English
    The Prime Voice
    Home»Crime»“ರೇಷನ್ ವ್ಯವಸ್ಥೆಯಲ್ಲಿ ಭಾರೀ ಗೋಲ್‌ಮಾಲ್: ಬೆಂಗಳೂರಿನಲ್ಲಿ ಲೋಕಾಯುಕ್ತ ಶಾಕ್!”
    Crime

    “ರೇಷನ್ ವ್ಯವಸ್ಥೆಯಲ್ಲಿ ಭಾರೀ ಗೋಲ್‌ಮಾಲ್: ಬೆಂಗಳೂರಿನಲ್ಲಿ ಲೋಕಾಯುಕ್ತ ಶಾಕ್!”

    SandeshBy SandeshJune 13, 2026Updated:June 13, 2026No Comments1 Min Read
    Facebook Twitter Pinterest LinkedIn Tumblr Email
    Share
    Facebook Twitter LinkedIn Pinterest Email

    ಬೆಂಗಳೂರು: ಪಡಿತರ ಅಕ್ಕಿ ಹಾಗೂ ಆಹಾರ ಧಾನ್ಯ ವಿತರಣೆಯಲ್ಲಿ ಭಾರೀ ಅಕ್ರಮ ನಡೆದಿರುವ ಶಂಕೆ ಹಿನ್ನೆಲೆ ಲೋಕಾಯುಕ್ತ ಪೊಲೀಸರು ಬೆಂಗಳೂರಿನ 22 ಹಾಗೂ ಬೆಂಗಳೂರು ಗ್ರಾಮಾಂತರದ 5 ಸೇರಿ ಒಟ್ಟು 27 ಆಹಾರ ನಿಗಮದ ಗೋದಾಮುಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

    ದಾಳಿಯ ವೇಳೆ ಹಲವು ಗೋದಾಮುಗಳಲ್ಲಿ ದಾಖಲೆಗಳು ಮತ್ತು ನೈಜ ದಾಸ್ತಾನು ನಡುವೆ ಗಂಭೀರ ವ್ಯತ್ಯಾಸಗಳು ಪತ್ತೆಯಾಗಿವೆ. ಶಾಂತಿನಗರ ಗೋದಾಮಿನಲ್ಲಿ ಸುಮಾರು 1,130 ಅಕ್ಕಿ ಮೂಟೆಗಳ ಲೆಕ್ಕದಲ್ಲಿ ವ್ಯತ್ಯಾಸ ಕಂಡುಬಂದಿದ್ದು, ಅಧಿಕಾರಿಗಳು ಸಮರ್ಪಕ ಉತ್ತರ ನೀಡಲು ವಿಫಲರಾಗಿದ್ದಾರೆ.

    ಬೊಬ್ಬನಹಳ್ಳಿ ಗೋದಾಮಿನಲ್ಲಿ ಸುಮಾರು 25 ಟನ್ ಅಕ್ಕಿಯನ್ನು ಲಾರಿಗೆ ಲೋಡ್ ಮಾಡುತ್ತಿರುವುದು ಪತ್ತೆಯಾಗಿದ್ದು, ಅಕ್ರಮ ಸಾಗಣೆ ಶಂಕೆ ವ್ಯಕ್ತವಾಗಿದೆ. ಬಸವನಗುಡಿ ಗೋದಾಮಿನಲ್ಲಿ ದಾಖಲೆ ಮತ್ತು ದಾಸ್ತಾನು ನಡುವೆ ಹೊಂದಾಣಿಕೆ ಇಲ್ಲದಿರುವುದು ಬೆಳಕಿಗೆ ಬಂದಿದೆ.

    ಹನುಮಂತನಗರ ಗೋದಾಮಿನಲ್ಲಿ ದಾಖಲೆಗಳಲ್ಲಿ ಉಲ್ಲೇಖಿಸಿದಷ್ಟು ಅಕ್ಕಿ ಮತ್ತು ರಾಗಿ ದಾಸ್ತಾನು ಲಭ್ಯವಿಲ್ಲದಿರುವುದು ಪತ್ತೆಯಾಗಿದೆ. ಹಲವು ಗೋದಾಮುಗಳಲ್ಲಿ ಹಮಾಲಿ ಕಾರ್ಮಿಕರಿಗೆ ಜೀವ ವಿಮೆ, ಇಎಸ್‌ಐ ಹಾಗೂ ಪಿಎಫ್ ಸೌಲಭ್ಯಗಳನ್ನು ನೀಡದೇ ಕಾರ್ಮಿಕರ ಹಕ್ಕುಗಳನ್ನು ಉಲ್ಲಂಘಿಸಿರುವ ಆರೋಪವೂ ಕೇಳಿಬಂದಿದೆ.

    ದಾಳಿ ವೇಳೆ ವಶಪಡಿಸಿಕೊಂಡ ದಾಖಲೆಗಳು ಮತ್ತು ಹಣಕಾಸು ವ್ಯವಹಾರಗಳ ಪರಿಶೀಲನೆಯನ್ನು ಲೋಕಾಯುಕ್ತ ಅಧಿಕಾರಿಗಳು ಮುಂದುವರಿಸಿದ್ದು, ಅಕ್ರಮಗಳಲ್ಲಿ ಭಾಗಿಯಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿ ವಿರುದ್ಧ ಕಾನೂನು ಕ್ರಮ ಜರುಗುವ ಸಾಧ್ಯತೆ ಇದೆ.

     

    Post Views: 202
    Share. Facebook Twitter Pinterest LinkedIn Tumblr Email
    Avatar photo
    Sandesh

    Related Posts

    ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.

    September 3, 2026

    ಪ್ರತಾಪ್ ಸಿಂಹ ವಿರುದ್ಧ ಅವಹೇಳನಕಾರಿ ಹೇಳಿಕೆ: ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ!.

    August 26, 2026

    ಹರಿಯಾಣದಲ್ಲಿ ಘನಘೋರ ಅಪರಾಧ: ಪತಿಯ ಮೇಲೆ ಹಲ್ಲೆ, ಕರುಳು ಕತ್ತರಿಸಿ ಚೀಲದಲ್ಲಿಟ್ಟ ಆರೋಪ!

    August 26, 2026
    Leave A Reply Cancel Reply

    Recent Posts

    • 2026ರಲ್ಲಿ ಜಗತ್ತು ನಡುಗುತ್ತಾ? ನೇಪಾಳ ದುರಂತದ ಬಳಿಕ ಮತ್ತೆ ವೈರಲ್ ಆಯ್ತು ಬಾಬಾ ವಂಗಾ ಭವಿಷ್ಯ!.
    • ದುನಿಯಾ ವಿಜಯ್ ದಾಂಪತ್ಯ ಜೀವನಕ್ಕೆ ಅಂತ್ಯ: 27 ವರ್ಷಗಳ ಒಡನಾಟಕ್ಕೆ ಹೈಕೋರ್ಟ್‌ ಮುದ್ರೆ, ಪತ್ನಿಗೆ ₹2 ಕೋಟಿ ಜೀವನಾಂಶ!.
    • India Postal Department: ಮಹಿಳೆಯರಿಗೆ ಅಂಚೆ ಇಲಾಖೆಯಿಂದ ಭರ್ಜರಿ ಅವಕಾಶ! ‘ಪೋಸ್ಟಲ್ ಶಕ್ತಿ’ ಹುದ್ದೆಗೆ ಸೆ.11ರಂದು ನೇರ ಸಂದರ್ಶನ.
    • ಓವರ್‌ಟೇಕ್ ವಿಚಾರಕ್ಕೆ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ: ದುನಿಯಾ ವಿಜಯ್ ಪುತ್ರ ಸಾಮ್ರಾಟ್ ವಿರುದ್ಧ FIR!.
    • ಬೆಂಗಳೂರು ಪವರ್ ಕಟ್: ಬೆಂಗಳೂರಿಗರಿಗೆ ಅಲರ್ಟ್! ಸೆ.3ರಂದು ಈ ಪ್ರಮುಖ ಪ್ರದೇಶಗಳಲ್ಲಿ 4 ಗಂಟೆ ಕರೆಂಟ್ ಇರಲ್ಲ.

    Recent Comments

    No comments to show.

    Archives

    • September 2026
    • August 2026
    • July 2026
    • June 2026
    • April 2026
    • March 2026
    • August 2025

    Categories

    • Crime
    • District
    • Entertainment
    • Home
    • National
    • Politics
    • Public
    • Sports
    Facebook X (Twitter) Instagram Pinterest
    Copyright © 2026 The Prime Voice. All Rights Reserved.

    Type above and press Enter to search. Press Esc to cancel.