ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಹಲಗೂರು ಗ್ರಾಮದಲ್ಲಿ ಲಂಚ ಸ್ವೀಕರಿಸುತ್ತಿದ್ದ ವೇಳೆ ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಮಧುಸೂದನ್ ಅವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ರೈತ ನಂಜುಂಡಸ್ವಾಮಿ ಅವರ ಭೂ ದಾಖಲೆ (ಪೋಡಿ) ಸಂಬಂಧಿತ ಕೆಲಸವನ್ನು ಮಾಡಿಕೊಡುವುದಾಗಿ ಹೇಳಿ, ಮಧುಸೂದನ್ ಅವರು ಒಟ್ಟು 2 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಈ ಮೊತ್ತದ ಭಾಗವಾಗಿ 10,000 ರೂ. ಮುಂಗಡ ಹಣವನ್ನು ಪಡೆಯುತ್ತಿದ್ದ ಸಂದರ್ಭದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದರು.
ಹಲಗೂರಿನಲ್ಲಿ ನಡೆದ ಕಾರ್ಯಾಚರಣೆಯಲ್ಲಿ, ರೈತರಿಂದ ಲಂಚದ ಹಣವನ್ನು ಕೈಗೆತ್ತಿಕೊಂಡು ಜೇಬಿಗೆ ಇಡುತ್ತಿದ್ದ ವೇಳೆ ಮಧುಸೂದನ್ ಅವರನ್ನು ಅಧಿಕಾರಿಗಳು ರೆಡ್ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಕರಣದ ಸಂಬಂಧ ಮುಂದಿನ ತನಿಖೆಯನ್ನು ಲೋಕಾಯುಕ್ತ ಪೊಲೀಸರು ಕೈಗೊಂಡಿದ್ದಾರೆ.
